ಗಿರಿಸಿರಿ ಸಾಂಸ್ಕೃತಿಕ ಕಲಾ ಸಂಸ್ಥೆಯ ಪ್ರಶಸ್ತಿ ಪ್ರದಾನ (ಜ.೧೧) ರಂದು
ವಿಜಯ ಟೈಮ್ಸ್ ನ್ಯೂಸ್ ಶಹಾಬಾದ್
ನಗರದ ಶ್ರೀಜಗದಂಬಾ ದೇವಸ್ಥಾನದ ಸಭಾಗೃಹದಲ್ಲಿ ಗಿರಿಸಿರಿ ಸಾಂಸ್ಕೃತಿಕ ಕಲಾ ಸಂಸ್ಥೆಯ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕವಿಗೋಷ್ಠಿ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಮರಲಿಂಗ ಯಾದಗಿರಿ ಸಂಚಾಲಕ ಅನಿಲ ಮೈನಾಳಕರ್ ಅವರು ಜಂಟಿಯಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜ.೧೧ ರಂದು ಶನಿವಾರ ಬೆಳಗ್ಗೆ ೧೦:೩೦ ಜರುಗುವ ಕಾರ್ಯಕ್ರಮದಲ್ಲಿ ತೊನಸನಹಳ್ಳಿ(ಎಸ್) ಗ್ರಾಮದ ಶಿವಸಾಯಿ ಧ್ಯಾನ ಧಾಮದ ಪಜ್ಯೂರಾದ ಶರಣ ಕೋತಲಪ್ಪ ಮುತ್ಯಾ ಇವರ ಸಾನಿಧ್ಯದಲ್ಲಿ ಸಮಾರಂಭ ಜರುಗುವುದು. ಉದ್ಯಮಿ ನರೇಂದ್ರ ವರ್ಮಾ ಕಾರ್ಯಕ್ರಮ ಉದ್ಘಾಟಿಸುವರು. ಪ್ರಾಂಶುಪಾಲರಾದ ಕೆ.ಬಿ.ಬಿಲ್ಲವ, ಬಾಲರಾಜ ಮಾಚನೂರ ಪ್ರಶಸ್ತಿ ಪ್ರದಾನ ಮಾಡುವರು. ಡಾ.ಮಲ್ಲಿನಾಥ ತಳವಾರ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ದಸಂಸ ರಾಜ್ಯ ಸಂಘಟನಾ ಸಂಚಾಲಕರಾದ ಮರಿಯಪ್ಪ ಹಳ್ಳೀ, ಕಾಂಗ್ರೆಸ್ ಮುಖಂಡ ವಿಜಯಕುಮಾರ ಜಿ. ರಾಮಕೃಷ್ಣ, ನಗರ ಪೊಲೀಸ್ ಠಾಣೆಯ ಸಿಪಿಐ ನಟರಾಜ ಲಾಡೆ, ಕದಸಂಸ ಜಿಲ್ಲಾ ಸಂಚಾಲಕ ಸುರೇಶ ಮೆಂಗನ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಪುತ್ರ ಕರಣಿಕ, ಬಿಜೆಪಿ ಮಂಡಲ ಅಧ್ಯಕ್ಷ ನಿಂಗಪ್ಪ ಹುಳಗೋಳಕರ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶರಣು ಪಗಲಾಪೂರ, ನಗರಸಭೆ ಸದಸ್ಯರಾದ ಸಾಬೇರಾ ಬೇಗಂ, ನಗರಸಭೆ ಸದಸ್ಯೆ ಸಾಬೇರಾ ಬೇಗಂ, ನಗರಸಭೆ ಮಾಜಿ ಸದಸ್ಯ ಡಾ.ಅಶೋಕ ಜಿಂಗಾಡೆ, ಆರ್ಯ ಈಡಿಗ ಸಮಾಜದ ಅಧ್ಯಕ್ಷ ಭೀಮಯ್ಯ ಗುತ್ತೇದಾರ, ಅಶೋಕ ಯಾದಗಿರಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
Copyright © 2025 Vijay Times News. All Rights Reserved.
Website by Samanth